ಡೆಹ್ರಾಡೂನ್ | ಉತ್ತರಾಖಂಡದಲ್ಲಿ ಯಾತ್ರಾ ಕೇಂದ್ರವಾದ ಗಂಗೋತ್ರಿಯ ಒಂಬತ್ತು ಕಿಲೋಮೀಟರ್ಗಳಷ್ಟು ದೂರದಲ್ಲಿರುವ ದೇವಗಢದಲ್ಲಿ ತಾತ್ಕಾಲಿಕ ಸೇತುವೆ ಕುಸಿದು ಇಬ್ಬರು ಯಾತ್ರಿಕರು ಕೊಚ್ಚಿ ಹೋಗಿದ್ದು 14 ಯಾತ್ರಿಕರು ನೀರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ.
ನದಿಯಲ್ಲಿ ಏಕಾಏಕಿ ನೀರು ಹೆಚ್ಚಾದ ಪರಿಣಾಮ ಸೇತುವೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ವೇಳೆ ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದೆ. 16 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಈ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಪತ್ತು ನಿರ್ವಹಣಾ ತಂಡ ತಿಳಿಸಿದೆ.
To post your articles and news,please signup. This facility will be available soon. Please wait...
© www.idondusuddi.site. All Rights Reserved. Design by myweb